ಇಂದು ಭಾರತದ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ರವರ ಜನ್ಮ ದಿನ ಈ ದಿನವನ್ನು ವಿಶ್ವ ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸಲಾಗತ್ತೆ. ಈ ದಿನ ಅವರ 90ನೇ ಹುಟ್ಟು ಹಬ್ಬದ ಪ್ರಯುಕ್ತ ಅವರನ್ನು ನೆನೆಯುತ್ತಾ ಕಲಾಂ ರವರ ಸ್ಫೂರ್ತಿದಾಯಕ ನುಡಿಮುತ್ತುಗಳನ್ನು ಇಲ್ಲಿ ನೀಡಲಾಗಿದೆ.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಒಂದು ಉತ್ತಮ ಪುಸ್ತಕ ನೂರು ಸ್ನೇಹಿತರಿಗೆ ಸಮಾನ, ಆದರೆ ಒಬ್ಬ ಉತ್ತಮ ಸ್ನೇಹಿತ ಒಂದು ಗ್ರಂಥಾಲಯಕ್ಕೆ ಸಮಾನ.
* ಇತರರಿಗಾಗಿ ನಿಮ್ಮ ಸ್ವಂತಿಕೆಯನ್ನು ಎಂದಿಗೂ ಬಿಟ್ಟುಕೊಡಬೇಡಿ. ಏಕೆಂದರೆ ಈ ಪ್ರಪಂಚದಲ್ಲಿ ನಿಮ್ಮ ಪಾತ್ರವನ್ನು ನಿಮಗಿಂತ ಚೆನ್ನಾಗಿ ಯಾರೂ ನಿಭಾಯಿಸಲು ಸಾಧ್ಯವಿಲ್ಲ.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಈ ಜಗತ್ತು ನಾವು ಹೇಳುವ ಸತ್ಯಕ್ಕಿಂತ ಮಿಗಿಲಾಗಿ ನಮ್ಮ ಕುರಿತು ಇತರರು ಹೇಳುವ ಸುಳ್ಳನ್ನು ನಂಬುತ್ತದೆ.
* ನೀವಂದುಕೊಂಡಿದ್ದನ್ನು ಸಾಧಿಸಲು ಮೊಟ್ಟಮೊದಲನೆಯದಾಗಿ ಬೇಕಿರುವುದು ಗುರಿಯೆಡೆಗಿನ ಏಕಾಗ್ರಚಿತ್ತ ಬದ್ಧತೆ ಅದರಲ್ಲಿ ಪ್ರೀತಿ.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ನಿದ್ರೆಯಲ್ಲಿ ಕಾಣುವುದು ಕನಸಲ್ಲ, ನಿದ್ದೆ ಗೆಡುವಂತೆ ಮಾಡುವುದಿದೆಯಲ್ಲ ಅದು ನಿಜವಾದ ಕನಸು.
* ನೊಣಗಳು ಸುಂದರವಾದ ದೇಹವನ್ನು ಬಿಟ್ಟು ಗಾಯದ ಮೇಲೆಯೇ ಕುಳಿತುಕೊಳ್ಳುವ ಹಾಗೆ, ಕೆಲವರು ನಮ್ಮಲ್ಲಿರುವ ಸದ್ಗುಣಗಳನ್ನು ತಳ್ಳಿಹಾಕಿ ಲೋಪದೋಷಗಳನ್ನು ಮಾತ್ರ ಹುಡುಕುತ್ತಾರೆ.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಸೋಲೆಂಬ ರೋಗಕ್ಕೆ ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮವೇ ಮದ್ದು, ಇದು ಯಾರಲ್ಲಿರುತ್ತದೆಯೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ
* ಒಬ್ಬರನ್ನ ಸೋಲಿಸೋದು ಸುಲಭ ಆದರೆ ಒಬ್ಬರ ಮನಸ್ಸನ್ನು ಗೆಲ್ಲೋದು ಕಷ್ಟ
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಒಬ್ಬ ಒಳ್ಳೆಯ ವ್ಯಕ್ತಿಗೆ ಮೋಸ ಮಾಡುವುದು ಎಂದರೆ ಕೈಯಲ್ಲಿರುವ ವಜ್ರವನ್ನು ಎಸೆದು ಕಲ್ಲನ್ನು ಎತ್ತಿಕೊಂಡಂತೆ
* ಕೆಲವರು ನಮ್ಮಲ್ಲಿರುವ ಸದ್ಗುಣಗಳನ್ನು ತಳ್ಳಿಹಾಕಿ ಲೋಪದೋಷಗಳನ್ನು ಮಾತ್ರ ಹುಡುಕುತ್ತಾರೆ.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಸೋಲೆಂಬ ರೋಗಕ್ಕೆ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸವೇ ಮದ್ದು. ಇದು ಯಾರಲ್ಲಿ ಇರುತ್ತದೆಯೋ ಅವರಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ.
* ಸೂರ್ಯನಂತೆ ಪ್ರಜ್ವಲಿಸಬೇಕಾದರೆ, ಅದರಂತೆ ದಹಿಸಬೇಕು.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಬದುಕಿನ ಯಶಸ್ಸು ಮತ್ತು ಸಂತೋಷದ ಅರಿವಾಗುವುದು ಕಷ್ಟಗಳನ್ನು ಅನುಭವಿಸಿದ ಮನುಷ್ಯನಿಗೆ ಮಾತ್ರ
* ಯಶಸ್ವಿಯಾಗುವ ನನ್ನ ನಿರ್ಣಯವು ಸಾಕಷ್ಟು ಬಲವಾಗಿದ್ದರೆ ವಿಫಲತೆಯು ನನ್ನನ್ನು ಏನು ಮಾಡಲಾಗದು.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಈ ಸಮಾಜವೇ ಒಂದು ವಿಚಿತ್ರ. ಮಾತನಾಡಿದರೆ ಮಾತಿನಲ್ಲಿರುವ ತಪ್ಪನ್ನು ಹುಡುಕುತ್ತಾರೆ, ಮೌನಿಯಾದರೆ ನಮ್ಮನ್ನೇ ತಪ್ಪಾಗಿ ಚಿತ್ರಿಸುತ್ತಾರೆ.
* ಅದೃಷ್ಟದ ಮೇಲೆ ಎಂದಿಗೂ ನಂಬಿಕೆ ಇಡಬೇಡಿ. ನಿಮ್ಮ ಕಠಿಣ ಶ್ರಮದ ಮೇಲೆ ನಂಬಿಕೆ ಇಡಿ, ಯಶಸ್ಸು ನಿಮ್ಮದಾಗುತ್ತದೆ.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಕೇವಲ ಯಶಸ್ಸಿನ ಕತೆಗಳನ್ನೇ ಹೆಚ್ಚು ಓದಬೇಡಿ. ಏಕೆಂದರೆ ಯಶಸ್ಸಿನ ಕತೆಗಳಲ್ಲಿ ನಿಮಗೆ ಸಂದೇಶಗಳಷ್ಟೇ ಸಿಗುತ್ತದೆ. ಸೋಲಿನ ಕತೆಗಳನ್ನು ಓದಿ, ನೀವು ಯಶಸ್ವಿಯಾಗಲು ಉತ್ತಮ ಚಿಂತನೆಗಳು ಕುಡಿಯೊಡೆಯುತ್ತದೆ.
* ಕಪ್ಪು ಬಣ್ಣ ಭಾವನಾತ್ಮಕವಾಗಿ ಕೆಟ್ಟದು. ಆದರೆ ಪ್ರತಿಯೊಂದು ಕಪ್ಪುಹಲಗೆಯು ವಿದ್ಯಾರ್ಥಿಯ ಜೀವನವನ್ನು ಪ್ರಕಾಶಮಾನವಾಗಿಸುತ್ತದೆ.
ವಿಶ್ವ ವಿದ್ಯಾರ್ಥಿ ದಿನ: ಕಲಾಂ ರವರ ನುಡಿಮುತ್ತುಗಳು
* ಗೆದ್ದಾಗ ಅಹಂ ಪಟ್ಟವನು ಉಳಿಯಲಾರ, ಸೋತಾಗ ಕುಸಿದು ಹೋದವನು ಬೆಳೆಯಲಾರ. ಗೆಲುವಿನ ಸಂಭ್ರಮ ನೆತ್ತಿಗೆ ಏರದಿರಲಿ, ಸೋಲಿನ ನೋವು ಮನಸಿಗೆ ತಾಕದಿರಲಿ.
* ದೊಡ್ಡ ಗುರಿ, ಜ್ಞಾನ ಹೆಚ್ಚಿಸಿಕೊಳ್ಳುವುದು, ಕಠಿಣ ಪರಿಶ್ರಮ ಮತ್ತು ಧೃಢ ನಿಷ್ಠೆ ಇವುಗಳನ್ನು ನೀವು ನಿರಂತರವಾಗಿ ಪಾಲಿಸಿದರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು.