ಆತಂಕ ಬಿಟ್ಟು ಮುನ್ನುಗ್ಗಲು ಕೆ.ಎಸ್.ನರಸಿಂಹಸ್ವಾಮಿಯವರ ಸಾಲುಗಳನ್ನು ಗಮನಿಸಿ

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಅಥವಾ ಫೇಲ್ ಅಗಿದ್ದೇವೆ ಎಂಬ ಮನೋಭಾವ ಬೇಡ. ಏಕೆಂದರೆ ಪರೀಕ್ಷೆಗಳಲ್ಲಿ ಫೇಲ್ ಆದವರೇ ಜೀವನದಲ್ಲಿ ಪಾಸ್ ಆಗುವರು ಎಂಬ ಮಾತಿದೆ. ಹಾಗಾಗಿ ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ.

By Kavya

ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಅಥವಾ ಫೇಲ್ ಅಗಿದ್ದೇವೆ ಎಂಬ ಮನೋಭಾವ ಬೇಡ. ಏಕೆಂದರೆ ಪರೀಕ್ಷೆಗಳಲ್ಲಿ ಫೇಲ್ ಆದವರೇ ಜೀವನದಲ್ಲಿ ಪಾಸ್ ಆಗುವರು ಎಂಬ ಮಾತಿದೆ. ಹಾಗಾಗಿ ಕಡಿಮೆ ಅಂಕಗಳಿಸಿದ ವಿದ್ಯಾರ್ಥಿಗಳು ಆತಂಕ ಪಡುವ ಅವಶ್ಯಕತೆ ಇಲ್ಲ.

ಆತಂಕ ಬಿಡಿ ಮುನ್ನುಗ್ಗಿ

ಕಡಿಮೆ ಅಂಕ ಪಡೆದ ಮಿತ್ರರಿಗಾಗಿಯೇ ಕನ್ನಡದ ಅಮರ ಪ್ರೇಮ ಕವಿ ಕೆ.ಎಸ್ ನರಸಿಂಹ ಸ್ವಾಮಿಯವರ ಕವಿತೆಯನ್ನು ಇಂದು ನೆನಪಿಸುತ್ತಿದ್ದೇವೆ. ಇದರಿಂದ ನಿಮ್ಮ ಮನಸ್ಸಿಗೆ ಕೊಂಚ ಧೈರ್ಯ ಬರಬಹುದು.

ಆತಂಕ ಬಿಡಿ ಮುನ್ನುಗ್ಗಿ

ಕೆ.ಎಸ್.ನ ಹಾಡು

ಹಿಂದಿನ ಸಾಲಿನ ಹುಡುಗರು' ಎಂದರೆ
ನಮಗೇನೇನೂ ಭಯವಿಲ್ಲ!
ನಮ್ಮಿಂದಾಗದು ಶಾಲೆಗೆ ತೊಂದರೆ;
ನಮಗೆಂದೆಂದೂ ಜಯವಿಲ್ಲ!
ನೀರಿನ ಜೋರಿಗೆ ತೇಲದು ಬಂಡೆ;
ಅಂತೆಯೆ ನಾವೀ ತರಗತಿಗೆ!
ಪರೀಕ್ಷೆ ಎಂದರೆ ಹೂವಿನ ಚೆಂಡೆ? -
ಚಿಂತಿಸಬಾರದು ದುರ್ಗತಿಗೆ.
ವರುಷ ವರುಷವೂ ನಾವಿದ್ದಲ್ಲಿಯೆ
ಹೊಸ ವಿದ್ಯಾರ್ಥಿಗಳಾಗುವೆವು;
ಪುಟಗಳ ತೆರೆಯದೆ ತಟತಟ ಓದದೆ
ಬಿಸಿಲಿಗೆ ಗಾಳಿಗೆ ಮಾಗುವೆವು!
ಜೊತೆಯಲಿ ಕೂರುವ ತಮ್ಮತಂಗಿಯರ
ಓದುಬರಾವನು ನೋಯಿಸೆವು;
ನಮ್ಮಂತಾಗದೆ ಅವರೀ ಶಾಲೆಯ
ಬಾವುಟವೇರಿಸಲೆನ್ನುವೆವು.
ಸಂಬಳ ಸಾಲದ ಉಪಾಧ್ಯಾಯರಿಗೆ
ಬೆಂಬಲವಾಗಿಯೆ ನಿಲ್ಲುವೆವು;
ಪಾಠಪ್ರವಚನ ರುಚಿಸದೆ ಹೋದರೆ
ಪಾಕಂಪೋಪ್ಪನು ಮೆಲ್ಲುವೆವು.
ತರಗತಿಗೆನೋ ನಾವೇ ಹಿಂದು;
ಹಿಂದುಳಿದವರೇ ನಾವಿಲ್ಲಿ!
ಆಟದ ಬಯಲಲಿ ನೋಡಲಿ ಬಂದು
ಆಂಜನೇಯರೇ ನಾವಲ್ಲಿ!
ಪಂಪ ಕುಮಾರವ್ಯಾಸರ ದಾಸರ
ಹರಿ ಹರ ಶರಣರ ಕುಲ ನಾವು!
ಕನ್ನಡದಲ್ಲೇ ತೇರ್ಗಡೆಯಾಗದ
ಪಂಡಿತಪುತ್ರರ ಪಡೆ ನಾವು!
ಗೆದ್ದವರೆಲ್ಲಾ ನಮ್ಮವರೇ ಸರಿ;
ಗೆಲ್ಲುವಾತುರವೆ ನಮಗಿಲ್ಲ.
ಸೋತವರಿಗೆ ನಾವಿಲ್ಲವೆ ಮಾದರಿ? -
ಕೆರೆಗೆ ಬೀಳುವುದು ತರವಲ್ಲ.
ಗೆದ್ದವರೇರುವ ಭಾಗ್ಯದ ದಾರಿಗೆ
ಕದಲದ ದೀಪಗಳಾಗುವೆವು;
ಹಲವರು ಸೋಲದೆ ಕೆಲವರ ಗೆಲವಿಗೆ
ಬೆಲೆಯಿರದೆಂದೇ ನಂಬಿಹೆವು.
ಊರಿಗೆ ಊರೇ ಹಸೆಯಲಿ ನಿಂತರೆ
ಆರತಿ ಬೆಳಗಲು ಜನವೆಲ್ಲಿ?
ಎಲ್ಲಾ ಹಾಡುವ ಬಾಯೇ ಆದರೆ
ಚಪ್ಪಾಳೆಗೆ ಜನವಿನ್ನೆಲ್ಲಿ?
ಲೋಕದ ಶಾಲೆಯ ಭಾಗ್ಯದ ಸೆರೆಯಲಿ
ಅನಂತಸುಖವನು ಕಂಡಿಹೆವು.
ಇದೇ ಸತ್ಯವೆಮಗಿದರಾಸರೆಯಲಿ
ಜಯಾಪಜಯಗಳ ದಾಟುವೆವು.
ಪುಸ್ತಕ ಓದದೆ ಪ್ರೀತಿಯನರಿತೆವು;
ಗೆಲ್ಲದೆ ಹೆಮ್ಮೆಯ ಗಳಿಸಿದೆವು;
ನಾವೀ ಶಾಲೆಯನೆಂದೂ ಬಿಡೆವು;
ನೆಮ್ಮದಿಯಾಗಿಯೆ ಉಳಿಯುವೆವು

ಇತಿಹಾಸದ ಪುಟಗಳನ್ನು ನೋಡಿದರೆ ಅಲ್ಲಿ ಪರೀಕ್ಷೆಯಲ್ಲಿ ಪಾಸ್ ಆದವರಿಗಿಂತ ಜೀವನಲ್ಲಿ ಪಾಸ್ ಆದವರ ಸಂಖ್ಯೆಯೆ ಹೆಚ್ಚು. ಮತ್ತು ಒಮ್ಮೆ ಫೇಲ್ ಆದವರು ಮಾತ್ರ ಸಾಧಿಸುವ ಹಠ ಪಡೆಯಬಲ್ಲರು.

For Quick Alerts
ALLOW NOTIFICATIONS  
For Daily Alerts

English summary
Students stop worrying about less marks, here we bring the KS Narasimhaswamy's poem to encourage you. don't worry be happy.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X